26
ರಚನೆಗಾರ: ದಾವೀದ. 
 1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. 
ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. 
 2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. 
ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು. 
 3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. 
ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು. 
 4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. 
ನಾನು ಕಪಟಿಗಳ ಜೊತೆ ಸೇರುವವನಲ್ಲ. 
 5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. 
ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. 
ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ. 
 7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. 
ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು. 
 8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ 
ನನಗೆ ಎಷ್ಟೋ ಪ್ರಿಯವಾಗಿದೆ. 
 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. 
ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ. 
 10 ಅವರು ಜನರನ್ನು ವಂಚಿಸುವರು; 
ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು. 
 11 ನಾನಾದರೋ ನಿರಪರಾಧಿ. 
ನನಗೆ ಕರುಣೆತೋರಿ ನನ್ನನ್ನು ರಕ್ಷಿಸು. 
 12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. 
ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು. 
*26:6: ಯಜ್ಞವೇದಿಕೆ ಈ ಕೀರ್ತನೆಗಾರನು ಯಾಜಕನೂ ಲೇವಿಯನೂ ಆಗಿದ್ದಿರಬೇಕೆಂದು ಇದು ಸೂಚಿಸುತ್ತದೆ. ಜನರನ್ನು ಸಭೆ ಸೇರಿಸುವುದರಲ್ಲಿ ಇವನು ಕಾರ್ಯನಿರತನಾಗಿದ್ದಿರಬಹದು. (ವಚನ 12) ಯಾಜಕರು ಮತ್ತು ಲೇವಿಯರು ಮಾತ್ರ ಸೇವೆಮಾಡಬಹುದಾದ ದೇವಾಲಯದ ಸ್ಥಳದಲ್ಲಿ ಇವನು ಸೇವೆ ಮಾಡುತ್ತಿದ್ದಿರಬಹುದು. ವಚನದ ಈ ಭಾಗವನ್ನು “ನಾನು ಯಜ್ಞವೇದಿಕೆಯ ಸುತ್ತಲೂ ಜನರನ್ನು ಸೇರಿಸಲು ಸಾಧ್ಯವಾಗುವಂತೆ” ಎಂದು ಸಹ ಅನುವಾದಿಸಬಹುದು. ಈ ರೀತಿ ಅನುವಾದ ಮಾಡಿದರೆ, ಈ ಕೀರ್ತನೆಗಾರನು ತನ್ನನ್ನು ಶುದ್ಧೀಕರಿಸಿಕೊಳ್ಳುತ್ತಿದ್ದದ್ದು ಕೇವಲ ಆರಾಧಕನಾಗಿಯೇ ಹೊರತು ಯಾಜಕನಾಗಲ್ಲ ಎಂಬ ಅರ್ಥವನ್ನು ಕೊಡುತ್ತದೆ.