82
ಸ್ತುತಿಗೀತೆ. 
ರಚನೆಗಾರ: ಆಸಾಫ. 
 1 ದೇವಾದಿದೇವನು ತನ್ನ ಸಭೆಯಲ್ಲಿ* ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ. ನಿಂತುಕೊಂಡು 
ದೇವರುಗಳಿಗೆ ನ್ಯಾಯತೀರ್ಪು ನೀಡುವನು. 
 2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? 
ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” 
 3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. 
ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ. 
 4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. 
ಅವರನ್ನು ದುಷ್ಟರಿಂದ ರಕ್ಷಿಸಿರಿ. 
 5 “ಅವರಿಗೆ ಏನೂ ಗೊತ್ತಿಲ್ಲ. 
ಅವರಿಗೆ ಏನೂ ಅರ್ಥವಾಗುವುದಿಲ್ಲ! 
ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. 
ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!” 
 6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: 
“ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. 
 7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. 
ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” 
 8 ದೇವರೇ ಎದ್ದೇಳು! ನೀನೇ ನ್ಯಾಯಾಧೀಶನಾಗಿರು! 
ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು! 
*82:1: ದೇವಾದಿದೇವನು ತನ್ನ ಸಭೆಯಲ್ಲಿ ಇಲ್ಲಿ ಇದರರ್ಥ, ಇಸ್ರೇಲ್ ನಾಯಕರುಗಳ ಸಭೆಯಲ್ಲಿ ಎಂದಿರಬಹುದು. ಅನೇಕಸಲ, ನಾಯಕರನ್ನು ಮತ್ತು ರಾಜರುಗಳನ್ನು ದೇವರುಗಳೆಂದು ಕರೆಯಲಾಗಿದೆ.