ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು 
 ೧೫
ದಾವೀದನ ಕೀರ್ತನೆ. 
 ೧ ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? 
ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 
 ೨ ಅವನು ಸಜ್ಜನನೂ, ನೀತಿವಂತನೂ, 
ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 
 ೩ ಅವನು ಚಾಡಿಯನ್ನು ಹೇಳದವನೂ, 
ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, 
ಯಾರನ್ನೂ ನಿಂದಿಸದವನೂ ಆಗಿರಬೇಕು. 
 ೪ ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, 
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, 
ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 
 ೫ ಅವನು ಸಾಲಕ್ಕೆ ಬಡ್ಡಿ ಕೇಳದವನೂ, 
ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. 
ಇಂಥವನು ಎಂದಿಗೂ ಕದಲುವುದಿಲ್ಲ.