೧ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, * 1 ಪೇತ್ರ 2:11; 1 ಯೊಹಾ. 3:3ನಾವು ದೇಹಾತ್ಮಗಳ ಕಲ್ಮಶವನ್ನು ಶುದ್ಧೀಕರಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತ್ತೆಗೆ ಪ್ರಯತ್ನಿಸೋಣ.
ಪೌಲನು ತಾನು ಮೊದಲು ಬರೆದ ಪತ್ರಿಕೆಯಿಂದ ಒಳ್ಳೆಯ ಫಲವುಂಟಾಯಿತೆಂದು ಸಂತೋಷಪಟ್ಟಿದ್ದು
೨  2 ಕೊರಿ. 6:11-13ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ಅ. ಕೃ. 20:33ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ. ೩ ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸತ್ತರೂ, ಬದುಕಿದರೂ ಎನ್ನುವಷ್ಟರ ಹಾಗೆಯೇ § 2 ಕೊರಿ. 6:11-13ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ. ೪ ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.
೫  * 2 ಕೊರಿ. 2:13ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ ೬ ಆದರೆ 2 ಕೊರಿ. 1:4ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ಅ. ಕೃ. 20:33ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು. ೭ ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಮಹಾ ಪ್ರೀತಿ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.
೮ ನಾನು ಬರೆದ ಪತ್ರದಿಂದ § 2 ಕೊರಿ. 2:2ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು * 2 ಕೊರಿ. 2:4ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ. ೯ ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ 1 ಕೊರಿ. 5:2ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ. ೧೦  2 ಸಮು. 12:13; ಅ. ಕೃ. 11:18ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. ೧೧ ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು. ನೀವು ನಿರ್ದೋಷಿಗಳೆಂದು ಸ್ಥಾಪಿಸುವುದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು, ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಶಪಟ್ಟು ಶಿಕ್ಷೆಮಾಡಿದಿರಿ ಇವೆಲ್ಲವೂ ಸಾದೃಶ್ಯಗಳಾಗಿವೆ. ೧೨ ನಾನು ನಿಮಗೆ ಬರೆದದ್ದು § 1 ಕೊರಿ. 5:1-2ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
೧೩ ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ. ೧೪ ಯಾಕೆಂದರೆ ನಾನು ತೀತನ ಮುಂದೆ * 2 ಕೊರಿ. 8:24; 9:2ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು. ೧೫ ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು 2 ಕೊರಿ. 2:9; 10:6ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ. ೧೬ ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.

*೭:೧ 1 ಪೇತ್ರ 2:11; 1 ಯೊಹಾ. 3:3

೭:೨ 2 ಕೊರಿ. 6:11-13

೭:೨ ಅ. ಕೃ. 20:33

§೭:೩ 2 ಕೊರಿ. 6:11-13

*೭:೫ 2 ಕೊರಿ. 2:13

೭:೬ 2 ಕೊರಿ. 1:4

೭:೬ ಅ. ಕೃ. 20:33

§೭:೮ 2 ಕೊರಿ. 2:2

*೭:೮ 2 ಕೊರಿ. 2:4

೭:೯ 1 ಕೊರಿ. 5:2

೭:೧೦ 2 ಸಮು. 12:13; ಅ. ಕೃ. 11:18

§೭:೧೨ 1 ಕೊರಿ. 5:1-2

*೭:೧೪ 2 ಕೊರಿ. 8:24; 9:2

೭:೧೫ 2 ಕೊರಿ. 2:9; 10:6